ಅಯೋಧ್ಯೆ ತೀರ್ಪು ಹಿನ್ನೆಲೆ: ಬೆಂಗಳೂರು ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ - ಬೆಂಗಳೂರಿನಲ್ಲಿ ಪೊಲೀಸ್ ಬಿಗಿ ಭದ್ರತೆ
ಅಯೋಧ್ಯೆ ತೀರ್ಪು ಹಿನ್ನೆಲೆಯಲ್ಲಿ ನಗರದಾದ್ಯಂತ ಭಾರೀ ಬಿಗಿ ಭದ್ರತೆ ವಹಿಸಲಾಗಿದ್ದು, ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್, ಪೂರ್ವ ವಿಭಾಗದ ಸುತ್ತಮುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಿಲಾಗಿದೆ. ಭದ್ರತೆಗೆ ಕೆಎಸ್ಆರ್ಪಿಯ ಸ್ಷೆಷಲ್ ಆಕ್ಷನ್ ಫೋರ್ಸ್ ತುಕಡಿ ನಿಯೋಜನೆ ಮಾಡಲಾಗಿದ್ದು, ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಗಸ್ತು ತಿರುಗಿ ಭದ್ರತೆ ಪರಿಶೀಲನೆ ನಡೆಸಿದ್ದಾರೆ.