ನರೇಂದ್ರ ಮೋದಿ ಪದಗ್ರಹಣ...ಭಾರೀ ನಿರೀಕ್ಷೆಯಲ್ಲಿ ಜಿಲ್ಲೆಯ ರೈತರು - undefined
ರಾಯಚೂರು: ಇಂದು ಎರಡನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಹೀಗಾಗಿ ಜಿಲ್ಲೆಯ ರೈತರು ನರೇಂದ್ರ ಮೋದಿ ಆಡಳಿತದ ಮೇಲೆ ಬಹಳಷ್ಟು ನಿರೀಕ್ಷೆಗಳನ್ನ ಇಟ್ಟುಕೊಂಡಿದ್ದಾರೆ. ಸತತ ಬರಗಾಲದಿಂದ ಜಿಲ್ಲೆಯ ಅನ್ನದಾತರು ತತ್ತರಿಸಿದ್ದು, ದೇಶದ ಅಭಿವೃದ್ಧಿ ದೃಷ್ಟಿಯಿಂದ ಜನತೆ ನರೇಂದ್ರ ಮೋದಿ ಅವರನ್ನ ಆಯ್ಕೆ ಮಾಡಿದ್ದಾರೆ. ಸ್ವಾಮಿನಾಥನ್ ವರದಿ ಜಾರಿ, ರಸಗೊಬ್ಬರ ದರ ಇಳಿಕೆ ಹೀಗೆ ನಾನಾ ಬೇಡಿಕೆಗಳ ಪಟ್ಟಿಯನ್ನೇ ಇಟ್ಟುಕೊಂಡಿದ್ದು ಇವೆಲ್ಲವನ್ನ ಪ್ರಧಾನಿ ಈಡೇರಿಸುತ್ತಾರೆ ಎಂಬ ಭರವಸೆಯಲ್ಲಿ ಜನರಿದ್ದಾರೆ.