ಕರ್ನಾಟಕ

karnataka

ಮಲ್ಲೇಶ್ವರದಿಂದ ಡಾ ಸಿ ಎನ್ ಅಶ್ವತ್ಥ್ ನಾರಾಯಣ್​ ಆಯ್ಕೆ

By

Published : May 13, 2023, 5:47 PM IST

ETV Bharat / videos

ಮಲ್ಲೇಶ್ವರದಿಂದ ಡಾ ಸಿ ಎನ್ ಅಶ್ವತ್ಥನಾರಾಯಣ್​ ಆಯ್ಕೆ: ಕಾರ್ಯಕರ್ತರ ಸಂಭ್ರಮ

ಬೆಂಗಳೂರು : ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಆಯ್ಕೆಯಾಗಿರುವ ಡಾ ಸಿ ಎನ್ ಅಶ್ವತ್ಥನಾರಾಯಣ್​ ಗೆಲುವನ್ನು ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಶನಿವಾರ ಸಂಭ್ರಮಿಸಿದರು. ಮಲ್ಲೇಶ್ವರದಲ್ಲಿರುವ ಶಾಸಕರ ಕಚೇರಿ ಬಳಿ ಜಮಾಯಿಸಿದ ಹೆಚ್ಚಿನ ಸಂಖ್ಯೆಯ ಜನರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.

ಇದನ್ನೂ ಓದಿ:ಸಚಿವ ಸುಧಾಕರ್ ಸೋಲಿಸಿದ ಪ್ರದೀಪ್​ ಈಶ್ವರ್.. ​​​ಇದು ಜನಸಾಮಾನ್ಯರ ಜಯ ಎಂದ ಪರಿಶ್ರಮ ಅಕಾಡೆಮಿ ಮುಖ್ಯಸ್ಥ

ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುತ್ತೇನೆ: ಈ ಸಂದರ್ಭದಲ್ಲಿ ಮಾತನಾಡಿದ ಅಶ್ವತ್ಥ್​ನಾರಾಯಣ್​, ತಮ್ಮನ್ನು ಆಯ್ಕೆ ಮಾಡಿರುವುದಕ್ಕೆ ಕ್ಷೇತ್ರದ ಜನತೆಗೆ ಧನ್ಯವಾದ ಸಲ್ಲಿಸಿದರು. ಕ್ಷೇತ್ರದ ವಿಧಾನಸಭಾ ಪ್ರತಿನಿಧಿಯಾಗಿ ಇಲ್ಲಿಗೆ ಏನೇನು ಕೆಲಸಗಳು ಆಗಬೇಕಿದೆಯೋ ಅದನ್ನು ಮುಂದುವರಿಸುತ್ತೇನೆ. ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಸೇರಿದಂತೆ ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಗೆ ಈ ಹಿಂದಿನಂತೆಯೇ ಒತ್ತು ನೀಡುತ್ತೇನೆ ಎಂದು ಹೇಳಿದರು. ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು.

ಇದನ್ನೂ ಓದಿ:ಪ್ರಿಯಾಂಕ್ ಖರ್ಗೆಗೆ ಹ್ಯಾಟ್ರಿಕ್ ಗೆಲುವು: ಮಣಿಕಂಠ ರಾಠೋಡ್​ ವಿರುದ್ಧ 13,638 ಮತಗಳ ಅಂತರದ ಜಯ

ABOUT THE AUTHOR

...view details