ಕರ್ನಾಟಕ

karnataka

ಚಲಿಸುತ್ತಿದ್ದ ಕಾರು ಸುಟ್ಟು ಭಸ್ಮ

ETV Bharat / videos

ತುಮಕೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪಾರು

By ETV Bharat Karnataka Team

Published : Jan 5, 2024, 3:14 PM IST

ತುಮಕೂರು:ಸಂಚರಿಸುತ್ತಿದ್ದಾಗ ದಿಢೀರ್ ಬೆಂಕಿ ಕಾಣಿಸಿಕೊಂಡು ಕಾರು ಧಗಧಗನೆ ಹೊತ್ತಿ ಉರಿದ ಘಟನೆ ಗುಬ್ಬಿ ತಾಲೂಕಿನ ಹೊಸಪಾಳ್ಯ ಗೇಟ್​ ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. 

ಗುಬ್ಬಿಯಿಂದ ತುಮಕೂರು ಕಡೆಗೆ ಹೊರಟಿದ್ದ ಹೋಂಡಾ ಐಕಾನ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್​ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹಾಸನದಲ್ಲಿ ಸಾರಿಗೆ ಬಸ್ ಪಲ್ಟಿ: 10ಕ್ಕೂ ಹೆಚ್ಚು ಮಂದಿಗೆ ಗಾಯ

ಕಳೆದ ಡಿಸೆಂಬರ್​ ತಿಂಗಳಲ್ಲಿಮಾರುತಿ ಕಾರಿಗೆ ಬೆಂಕಿ ತಗುಲಿ ಚಾಲಕ ಸಜೀವ ದಹನವಾದ ಘಟನೆ ನೆಲಮಂಗಲದ ಟೋಲ್ ಬಳಿ ಇರುವ ಪಾರ್ಲೆ ಜಿ ಬಿಸ್ಕೆಟ್ ಫ್ಯಾಕ್ಟರಿ ಬಳಿ ನಡೆದಿತ್ತು. ಇಂಥ ಘಟನೆಗಳಿಗೆ ಎಂಜಿನ್‌ ದೋಷ ಕಾರಣವೇ ಎಂಬುದು ಖಚಿತವಾಗಿಲ್ಲ. ಈ ಹಿಂದೆ ಎಲೆಕ್ಟ್ರಿಕ್‌ ಕಾರುಗಳಲ್ಲಿ ಈ ರೀತಿಯ ದೋಷಗಳು ಕಂಡುಬಂದು ಬೆಂಕಿ ಹೊತ್ತಿಕೊಂಡಿದ್ದ ಘಟನೆಗಳು ನಡೆದಿದ್ದವು.

ABOUT THE AUTHOR

...view details