ಕರ್ನಾಟಕ

karnataka

ಝೀರೋ ಟ್ರಾಫಿಕ್ ಏಕೆ ಮಾಡಿದ್ದೀರಿ ಎಂದು ಮೈಸೂರು ಪೊಲೀಸ್​ ಕಮಿಷನರ್ ಮೇಲೆ ಸಿಎಂ ಗರಂ : ವಿಡಿಯೋ

By

Published : Jun 10, 2023, 11:10 PM IST

ಝೀರೋ ಟ್ರಾಫಿಕ್ ಏಕೆ ಮಾಡಿದ್ದೀರಿ ಎಂದು ಮೈಸೂರು ಪೊಲೀಸ್​ ಕಮಿಷನರ್ ಮೇಲೆ ಸಿಎಂ ಗರಂ : ವಿಡಿಯೋ

ಮೈಸೂರು: ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದು ಹೇಳಿದ್ದೆ. ಮತ್ತೇಕೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದಿರಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕಮಿಷನರ್ ರಮೇಶ್ ಬಾನೋತ್ ಮೇಲೆ ಗರಂ ಆಗಿರುವ ಘಟನೆ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದಿದೆ. ಎರಡನೇ ಬಾರಿ ಸಿಎಂ ಆದ ಮೇಲೆ ಮೊದಲ ಬಾರಿಗೆ ಸ್ವಕ್ಷೇತ್ರ ವರುಣಾಗೆ ಆಗಮಿಸಿದ ಸಿದ್ದರಾಮಯ್ಯ, ಅಲ್ಲಿ ಮತದಾರರಿಗೆ ಕೃತಜ್ಞತಾ ಸಭೆ ನಡೆಸಿ ಹೆಲಿಕಾಪ್ಟರ್ ನಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಶಿಷ್ಟಾಚಾರದಂತೆ ಮುಖ್ಯಮಂತ್ರಿಗಳಿಗೆ ನಗರ ಪೊಲೀಸ್​ ಕಮಿಷನರ್ ವಿಮಾನ ನಿಲ್ದಾಣದಿಂದ ಜಿಲ್ಲಾ ಪಂಚಾಯತ್ ವರೆಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದರು. 

ವಿಮಾನ ನಿಲ್ದಾಣದಿಂದ ಝೀರೋ ಟ್ರಾಫಿಕ್ ನಲ್ಲಿ ಆಗಮಿಸಿದ ಮುಖ್ಯಮಂತ್ರಿಗಳು ಜಿಲ್ಲಾ ಪಂಚಾಯತ್ ಆವರಣದಲ್ಲಿ ಕಾರಿನಿಂದ ಇಳಿಯುತ್ತಿದ್ದಂತೆ, ನನಗೆ ಝಿರೋ ಟ್ರಾಫಿಕ್ ಬೇಡ ಎಂದು ಹೇಳಿದ್ದೆ. ಈಗ ಏಕೆ ಝಿರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದೀರಿ, ನಿಮಗೆ ಇದು ಗೊತ್ತಿಲ್ಲವೇ ಎಂದು ನಗರ ಪೋಲಿಸ್ ಕಮಿಷನರ್ ಗೆ ಕೇಳಿದರು. ಆಗ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಏನು ಮಾತನಾಡದೆ ಮೌನವಾಗಿದ್ದರು.

ಮುಖ್ಯಮಂತ್ರಿ ಆದ ತಕ್ಷಣ ಯಾವುದೇ ಕಾರ್ಯಕ್ರಮಗಳಲ್ಲಿ ಹೂವಿನ ಹಾರ ಹಾಕಬೇಡಿ ಹಾಗೂ ಓಡಾಟ ಮಾಡುವಾಗ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಬೇಡಿ ಸಿದ್ದರಾಮಯ್ಯನವರು ಹೇಳಿದ್ದರು.

ಇದನ್ನೂ ಓದಿ :ಅಂಜನಾದ್ರಿ ಬೆಟ್ಟದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ ಕಿಷ್ಕಿಂಧಾ ಯುವ ಚಾರಣ ಬಳಗ: ವಿಡಿಯೋ

ABOUT THE AUTHOR

...view details