ಯುವಕನನ್ನು ನಗ್ನಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಐವರ ಬಂಧನ: ಪೊಲೀಸ್ ಕಮಿಷನರ್ ಸಂತೋಷ ಬಾಬು - etv bharat kannada
ಹುಬ್ಬಳ್ಳಿ:ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಹುಬ್ಬಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಸಂತೋಷ್ ಬಾಬು ಮಾತನಾಡಿದ್ದಾರೆ. ಯುವಕನನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಿರುವ ಎರಡು ವಿಡಿಯೋಗಳು ನಮ್ಮ ಗಮನಕ್ಕೆ ಬಂದಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್, ವಿನಾಯಕ್,ಗಣೇಶ್,ಸಚಿನ್ ,ಮಂಜುನಾಥ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ ಎಂದರು.
ಇನ್ಸ್ಟಾಗ್ರಾಮ್ನಲ್ಲಿ ಸಂತ್ರಸ್ತ ಸಂದೀಪ್, ಪ್ರಜ್ವಲ್ ತಾಯಿಗೆ ಕೆಟ್ಟದಾಗಿ ಬೈದಿದ್ದ. ಈ ಹಿನ್ನೆಲೆಯಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಇದುವೆರಗೂ ಸಂದೀಪ್ ದೂರು ಕೊಟ್ಟಿಲ್ಲ. ಯಾರ ಸಂಪರ್ಕದಲ್ಲೂ ಸಹ ಇಲ್ಲ. ಮೂರು ನಾಲ್ಕು ತಿಂಗಳ ಹಿಂದೆ ನಡೆದ ಘಟನೆ ಇದಾಗಿದೆ. ಹುಬ್ಬಳ್ಳಿಯ ಸೆಟ್ಲಮೆಂಟ್ನಲ್ಲಿ ನಡೆದ ಘಟನೆ. ಆದರೆ, ಸ್ಥಳ ಯಾವುದು ಎಂದು ಖಚಿತವಾಗಿಲ್ಲ. ಪೊಲೀಸರು ಈ ತರಹದ ಘಟನೆ ಆಗೋ ಮುಂಚೆ ಎಚ್ಚೆತ್ತುಕೊಳ್ಳಬೇಕಿತ್ತು. ವಿಡಿಯೋ ಇರುವ ಸಂದೀಪ್ಗಾಗಿ ಹುಡುಕಾಡುತ್ತಿದ್ದೇವೆ ಎಂದು ಹೇಳಿದರು.