'ಹೈಕಮಾಂಡ್ ಹೇಳಿದ್ದನ್ನು ನಾವು ಕೇಳಬೇಕು': ದೆಹಲಿಯಲ್ಲಿ ಡಿ.ಕೆ.ಶಿವಕುಮಾರ್ ಹೇಳಿಕೆ - ಡಿಕೆ ಶಿವಕುಮಾರ್
ನವದೆಹಲಿ/ಬೆಂಗಳೂರು:ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಂದ ಬಳಿಕ ಆರಂಭವಾಗಿದ್ದ ಸಿಎಂ ಆಯ್ಕೆ ಗೊಂದಲಕ್ಕೀಗ ತೆರೆಬಿದ್ದಿದೆ. ಸಿದ್ದರಾಮಯ್ಯ ಸಿಎಂ ಆಗಿ ಎರಡನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡಲಿದ್ದು, ಡಿಸಿಎಂ ಆಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ಖಚಿತ. ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ನೇತೃತ್ವದ ಸಭೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ಸಂದರ್ಭದಲ್ಲಿ ಡಿಸಿಎಂ ಸ್ಥಾನಕ್ಕೆ ಒಪ್ಪಿಗೆ ಸೂಚಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ, "ಹೈಕಮಾಂಡ್ ಏನು ಹೇಳುತ್ತೋ ಅದನ್ನು ನಾವು ಕೇಳಬೇಕಾಗುತ್ತೆ" ಎಂದರು. ಈ ಮೂಲಕ ತಮ್ಮ ಡಿಸಿಎಂ ಸ್ಥಾನವನ್ನು ಅವರು ಖಚಿತಪಡಿಸಿದಂತಿದೆ.
ಇನ್ನು ಬೆಂಗಳೂರಿನಲ್ಲಿರುವ ಡಿಕೆಶಿ ನಿವಾಸದ ಮುಂದೆ ಅವರ ಬೆಂಬಲಿಗರು ಮತ್ತು ಕಾರ್ಯಕರ್ತರು 'ಕರ್ನಾಟಕದ ಮುಂದಿನ ಉಪ ಮುಖ್ಯಮಂತ್ರಿ' ಎಂದು ಬರೆದ ಬ್ಯಾನರ್ಗಳನ್ನು ಈಗಾಗಲೇ ಅಳವಡಿಸಿದ್ದಾರೆ. ಮೇ 20 ರಂದು ಕಂಠೀರವ ಮೈದಾನದಲ್ಲಿ ಸಿಎಂ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಸಿದ್ದರಾಮಯ್ಯಗೆ ಸಿಎಂ ಪಟ್ಟ, ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್; 20ಕ್ಕೆ ಪ್ರಮಾಣ ವಚನ