ದಾವಣಗೆರೆ: ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಅದ್ಧೂರಿ ವೇದಿಕೆ, ಸಕಲ ಸಿದ್ಧತೆ
ದಾವಣಗೆರೆ: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ 75 ನೇ ವರ್ಷದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಬೆಣ್ಣೆ ನಗರಿಯಲ್ಲಿ ಅರಮನೆ ಮಾದರಿಯ ವೇದಿಕೆ ರೂಪುಗೊಳ್ಳುತ್ತಿದೆ. ನಗರದ ಹೊರವಲಯದಲ್ಲಿರುವ ಎಸ್ಎಸ್ ಪ್ಯಾಲೇಸ್ ಗ್ರೌಂಡ್ನಲ್ಲಿ 100 ಅಡಿ ಉದ್ದ ಹಾಗೂ 200 ಅಡಿ ಅಗಲದ ಬೃಹತ್ ವೇದಿಕೆ ನಿರ್ಮಾಣಗೊಂಡಿದೆ. ಗಣ್ಯರು ಮತ್ತು ಜನಸಾಮಾನ್ಯರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ವೇದಿಕೆಯ ಹಿಂಭಾಗದಲ್ಲಿ ಭೋಜನದ ವ್ಯವಸ್ಥೆ ಮಾಡಲಾಗುತ್ತಿದೆ.
Last Updated : Feb 3, 2023, 8:25 PM IST