ಕರ್ನಾಟಕ

karnataka

By

Published : Mar 16, 2022, 8:30 PM IST

Updated : Feb 3, 2023, 8:20 PM IST

ETV Bharat / videos

ಅಪ್ಪು ಜನ್ಮದಿನ.. ಗಂಗಾವತಿಯಲ್ಲಿ ಅಭಿಮಾನಿಗಳಿಂದ 'ಜೇಮ್ಸ್​' ಬೃಹತ್​ ಮೆರವಣಿಗೆ

ಗಂಗಾವತಿ:ಸ್ಯಾಂಡಲ್​ವುಡ್​ನ ಪ್ರತಿಭಾವಂತ ನಟ, ಸಾಮಾಜಿಕ ಸೇವೆಯಿಂದಲೇ ಜನರ ಮನಸ್ಸಿನಲ್ಲಿ ಸ್ಥಾನ ಗಳಿಸಿರುವ ದಿ. ಪುನೀತ್ ರಾಜ್ ಕುಮಾರ್ ಅವರ 47ನೇ ಹುಟ್ಟುಹಬ್ಬದ ಅಂಗವಾಗಿ ನಗರದಲ್ಲಿ ಅಭಿಮಾನಿಗಳಿಂದ ಬೃಹತ್ ಮೆರವಣಿಗೆ ನಡೆಯಿತು. ಈ ವೇಳೆ ಅಪ್ಪು ಅವರ ನೂರಾರು ಭಾವಚಿತ್ರಗಳು ರಾರಾಜಿಸುತ್ತಿದ್ದವು. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡು ಅಭಿಮಾನ ಮೆರೆದರು. ತೆರೆದ ವಾಹನದಲ್ಲಿ 'ಜೇಮ್ಸ್​' ಭಾವಚಿತ್ರವನ್ನಿಟ್ಟು ಮೆರವಣಿಗೆ ಮಾಡಲಾಯಿತು. ನಗರದಲ್ಲಿ ಸುಮಾರು ನಾಲ್ಕು ಗಂಟೆಗೂ ಅಧಿಕ ಕಾಲ ಫ್ಯಾನ್ಸ್​ ಬಿರುಬಿಸಿಲನ್ನು ಲೆಕ್ಕಿಸದೇ ಮೆರವಣಿಗೆಯಲ್ಲಿ ಭಾಗವಹಿಸಿದ್ದು, ಅಪ್ಪು ಮೇಲಿನ ಅಭಿಮಾನಕ್ಕೆ ಸಾಕ್ಷಿಯಾಗಿತ್ತು.
Last Updated : Feb 3, 2023, 8:20 PM IST

ABOUT THE AUTHOR

...view details