ಬಾರ್ಡರ್-ಗವಾಸ್ಕರ್ ಟ್ರೋಫಿ ಗೆಲ್ಲಿಸಿಕೊಟ್ಟ ನಾಯಕ ರಹಾನೆಗೆ ಅದ್ದೂರಿ ಸ್ವಾಗತ
ಮುಂಬೈ:ಖಾಯಂ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆಲ್ಲಲು ನೆರವಾಗಿದ್ದ ನಾಯಕ ಅಜಿಂಕ್ಯ ರಹಾನೆ ಇಂದು ತವರಿಗೆ ಮರಳಿದ್ದು, ಸ್ಥಳೀಯರು ಮತ್ತು ಕುಟುಂಬಸ್ಥರು ಅದ್ದೂರಿಯಾಗಿ ಬರ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದ ಸಂಭ್ರಮಕ್ಕೆ ರಹಾನೆ ಅವರಿಗೆ ಆರತಿ ಬೆಳಗಿ ಬರಮಾಡಿಕೊಂಡಿದ್ದಲ್ಲದೆ, ಅವರ ಕೈಯಿಂದ ಕೇಕ್ ಕಟ್ ಮಾಡಿಸಿದ್ದಾರೆ. ರಹಾನೆಗೆ ಪತ್ನಿ ಮತ್ತು ಮಗಳು ಕೂಡ ಈ ಸಂದರ್ಭದಲ್ಲಿ ಸಾಥ್ ನೀಡಿದರು.