ನೆಲಮಂಗಲದಲ್ಲಿ ಅದ್ಧೂರಿ 73ನೇ ಸ್ವಾತಂತ್ರ್ಯ ದಿನೋತ್ಸವ
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದ ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಶಾಸಕ ಡಾ.ಕೆ.ಶ್ರೀನಿವಾಸ ಮೂರ್ತಿ ಮತ್ತು ತಾಲೂಕು ದಂಡಾಧಿಕಾರಿ ರಾಜಶೇಖರ್ ಅವರು ಧ್ವಜಾರೋಹಣ ನೆರವೇರಿಸಿದರು. ನೆಲಮಂಗಲ ಉಪವಿಭಾಗದ ಪೊಲೀಸರು, ಎನ್ಸಿಸಿ ತಂಡ ಮತ್ತು ತಾಲೂಕಿನ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.