ಹುಬ್ಬಳ್ಳಿ: ನಗರದ ಉಜ್ವಲ್ ನರಗುಂದ ಎಂಬ ಕಲಾವಿದರೊಬ್ಬರು ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಪೆನ್ಸಿಲ್ ಸ್ಕೆಚ್ ಬಿಡಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಎಸ್ಪಿಬಿ ಅವರ ಅಗಲಿಕೆಯಿಂದ ಸಾಂಸ್ಕೃತಿಕ ಲೋಕಕ್ಕೆ ತುಂಬಲಾಗದ ನಷ್ಟವಾಗಿದೆ. ಯಾವುದೇ ಹಾಡು ಕೊಟ್ಟರೂ ಭಾವ ಪರವಶರಾಗಿ ಜೀವ ತುಂಬಿ ಹಾಡುತ್ತಿದ್ದ ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.