ದೆಹಲಿ ಹಿಂಸಾಚಾರದ ಹಿಂದೆ ಮೋದಿ ಹಿಂಬಾಲಕರ ಕೈವಾಡವಿದೆ: ಪ್ರೊ. ಮಹೇಶ್ ಚಂದ್ರಗುರು ಆರೋಪ - Prof. Mahesh Chandraguru informs about farmers' protest
ದೆಹಲಿಯ ಕೆಂಪುಕೋಟೆಯಲ್ಲಿ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರದ ಹಿಂದೆ ಪ್ರಧಾನಿ ಮೋದಿ ಹಿಂಬಾಲಕರ ಕೈವಾಡವಿದೆ ಎಂದು ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ಗಂಭೀರವಾಗಿ ಆರೋಪಿಸಿದ್ದಾರೆ. ಮೈಸೂರು ನಗರದ ಪತ್ರಕರ್ತರ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ರೈತರ ಪ್ರತಿಭಟನೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.