ಕರ್ನಾಟಕ

karnataka

ದಾವಣಗೆರೆಯಲ್ಲಿ ಮಳೆಯ ಆರ್ಭಟ: ಚನ್ನಗಿರಿಯಲ್ಲಿ ತೋಟಗಳಿಗೆ ನುಗ್ಗಿದ ನೀರು

By

Published : Sep 4, 2020, 5:14 PM IST

ದಾವಣಗೆರೆ: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಚನ್ನಗಿರಿ ತಾಲೂಕಿನ ಕಾರಿಗನೂರಿನಲ್ಲಿ ಅಡಿಕೆ ಬೆಳೆಗೆ ಹಾನಿಯಾಗಿದೆ. ಇದರಿಂದ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ. ಕಾರಿಗನೂರು ಗ್ರಾಮದ ರೈತ ರುದ್ರೇಶ್ ಅವರ 2 ಎಕರೆ ಜಮೀನಿಗೆ ನೀರು ನುಗ್ಗಿದ್ದು, ತೆಂಗು, ಬಾಳೆ ಅಡಿಕೆ, ಮೆಣಸು ಬೆಳೆ ಸಂಪೂರ್ಣ ಜಲಾವೃತವಾಗಿದೆ. ಈ ಗ್ರಾಮದಲ್ಲಿ ಹಲವು ಜಮೀನುಗಳು ನೀರಿನಿಂದ ಆವೃತವಾಗಿವೆ. ಜಿಲ್ಲೆಯಲ್ಲಿ ಇನ್ನೂ 2 ದಿನಗಳ ಕಾಲ ಮಳೆ ಸುರಿಯಲಿದ್ದು, ಮೆಕ್ಕೆ ಜೋಳ ಸೇರಿ ಇತರೆ ಬೆಳೆ ಬೆಳೆದ ರೈತರ ಆತಂಕ ಮತ್ತಷ್ಟು ಹೆಚ್ಚುವಂತೆ ಮಾಡಿದೆ.

ABOUT THE AUTHOR

...view details