ಕೊನೆ ಹಂತದ ಕಸರತ್ತು: ಹೊಸಕೋಟೆಯಲ್ಲಿ ಕೈ, ಕಮಲ ಪಾಳಯದಿಂದ ಭರ್ಜರಿ ಪ್ರಚಾರ - Hoskote contruency news
ಇಂದು ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದ್ದು, ಹೊಸಕೋಟೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕೈಗೊಳ್ಳಲಾಗಿದೆ. ಒಂದು ಕಡೆ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಭಾರತಿಶೆಟ್ಟಿ ನೇತೃತ್ವದಲ್ಲಿ ಮಹಿಳೆಯರು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಪರವಾಗಿ ಬೈಕ್ ರಾಲಿ ನಡೆಸಿದರೆ, ಮತ್ತೊಂದೆಡೆ ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಸುರೇಶ್ ಪರ ಮತಬೇಟೆಗೆ ಘಟಾನುಘಟಿ ನಾಯಕ ಇಳಿದ್ದಾರೆ. ಕಾಂಗ್ರೆಸ್ ಹಿರಿನ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಕೃಷ್ಣಬೈರೇಗೌಡ, ಜಮೀರ್ ಅಹಮದ್ ಸೇರಿದಂತೆ ಹಲವರು ರೋಡ್ ಶೋ ನಡೆಸಿದರು.