ಅನಂತ್ ಕುಮಾರ್ ಹೇಳಿಕೆ ಖಂಡಿಸಿ ಬಿಎಸ್ಎನ್ಎಲ್ ನೌಕರರ ಪ್ರತಿಭಟನೆ - uttarkannada news
ಬಿಎಸ್ಎನ್ಎಲ್ ನೌಕರರು ದೇಶದ್ರೋಹಿಗಳು ಎಂಬ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಗೆ ಆಲ್ ಇಂಡಿಯಾ ಯುನಿಯನ್ ಅಂಡ್ ಅಸೋಸಿಯೇಷನ್ ಆಫ್ ಬಿಎಸ್ಎನ್ಎಲ್ (ಎಯುಬಿ) ಉತ್ತರಕನ್ನಡ ಘಟಕದ ನೌಕರರು ಖಂಡನೆ ವ್ಯಕ್ತಪಡಿಸಿದ್ದು, ಕ್ಷಮೆ ಕೋರುವವರೆಗೂ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಸ್ವಂತ ಆದಾಯದ ಮೇಲೆ ಸ್ವಾವಲಂಬಿಯಾಗಿ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಸರ್ಕಾರ ಯಾವುದೇ ರೀತಿಯ ಹಣ ಅಥವಾ ಬಜೆಟ್ನಲ್ಲಿ ಮೀಸಲಿರಿಸಿಲ್ಲ ಎಂದು ಆರೋಪಿಸಿದರು.