ಬಿಜೆಪಿಗೆ ಗೆಲುವಿನ 'ಶಿರಾ' ಹಂಚಿದ ವಿಜಯೇಂದ್ರ.. ಅಭಿಮಾನಿಗಳಿಂದ ಪೇಟ ತೊಡಿಸಿ ಸನ್ಮಾನ
ಶಿರಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರಗೆ ಸ್ಥಳೀಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪೇಟ ತೊಡಿಸಿ, ಬೆಳ್ಳಿ ಖಡ್ಗ ನೀಡಿ ಸನ್ಮಾನಿಸುವ ಮೂಲಕ ವಿಜಯೋತ್ಸವ ಆಚರಿಸಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ನ ಭದ್ರ ಕೋಟೆಯಾಗಿದ್ದ ಶಿರಾದಲ್ಲಿ ಕಮಲ ಅರಳಿಸಲು ವಿಜಯೇಂದ್ರ ಪಾತ್ರ ಬಹು ಮುಖ್ಯ ಎಂದು ಅಭಿಮಾನಿಗಳು ಸಂತಸ ಹಂಚಿಕೊಂಡರು.