ಚಿಕ್ಕಮಗಳೂರು: ಶ್ರೀ ಕೋದಂಡರಾಮ ಚಂದ್ರಸ್ವಾಮಿ ದೇವಸ್ಥಾನದ ಬಾಗಿಲು ಓಪನ್ - Sri Kodandarama Chandraswamy Temple
ಚಿಕ್ಕಮಗಳೂರು: ಕೋವಿಡ್ -19 ಭೀತಿ ಹಿನ್ನೆಲೆ ಕಳೆದ ಎರಡೂವರೆ ತಿಂಗಳಿನಿಂದ ರಾಜ್ಯದ ಪ್ರತಿಯೊಂದು ದೇವಾಲಯಗಳಿಗೆ ಬೀಗ ಜಡಿಯಲಾಗಿತ್ತು. ಆದರೆ ಇಂದಿನಿಂದ ದೇವಾಲಯಗಳ ಬಾಗಿಲು ತೆರೆಯಲು ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿ, ಕಾರ್ಯಾರಂಭ ಮಾಡುವುದಕ್ಕೆ ಅನುಮತಿ ನೀಡಿದೆ. ಈ ಹಿನ್ನೆಲೆ ಚಿಕ್ಕಮಗಳೂರು ನಗರದ ಹೊರವಲಯದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಕೋದಂಡರಾಮ ಚಂದ್ರಸ್ವಾಮಿ ದೇವಸ್ಥಾನದ ಬಾಗಿಲು ತೆರೆದಿದ್ದು, ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಕುರಿತು ದೇವಸ್ಥಾನದ ಮುಂಭಾಗದಿಂದ ನೀಡಿದ ಒಂದು ಪ್ರತ್ಯಕ್ಷ ವರದಿ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರಾದ ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಅವರ ಜೊತೆ ನಡೆಸಿದ ಒಂದು ಚಿಟ್ ಚಾಟ್ ಇಲ್ಲಿದೆ..