ವಿರೂಪಾಪುರ ಗಡ್ಡೆಯಲ್ಲಿ ಅಕ್ರಮ ರೆಸಾರ್ಟ್ಗಳ ತೆರವು ಕಾರ್ಯಾಚರಣೆ - ವಿರೂಪಾಪುರ ಗಡ್ಡೆಯಲ್ಲಿ ಅಕ್ರಮ ರೆಸಾರ್ಟ್ಗಳ ತೆರವು ಕಾರ್ಯಾಚರಣೆ
ಕೊಪ್ಪಳ: ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಗಂಗಾವತಿ ತಾಲೂಕು ವಿರೂಪಾಪುರ ಗಡ್ಡೆಯಲ್ಲಿ ಇಂದು ಬೆಳಗ್ಗೆಯಿಂದಲೇ ಅಕ್ರಮ ರೆಸಾರ್ಟ್ಗಳ ತೆರವು ಕಾರ್ಯ ಶುರುವಾಗಿದೆ. ಜಿಲ್ಲಾಡಳಿತ ತೆರವು ಕಾರ್ಯಾಚರಣೆ ನಡೆಸುತ್ತಿದ್ದು, ವಿರೂಪಾಪುರಗಡ್ಡೆಯಲ್ಲಿ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೊತೆಗೆ ವ್ಯಾಪಕ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.