ಚುನಾವಣೆಯಲ್ಲಿ ಅಭಿಮಾನ ಅನ್ನೋದು ಸಾಮಾನ್ಯ. ಅದರಂತೆ ಇಲ್ಲೊಬ್ಬ ಅಭಿಮಾನಿ ಮೈತ್ರಿ ಅಭ್ಯರ್ಥಿ ಗೆಲುವಿಗಾಗಿ ಪ್ರಾರ್ಥಿಸಿ ದೀರ್ಘ ದಂಡ ನಮಸ್ಕಾರ ಹಾಕಿದ್ದಾನೆ. ಮಂಜುನಾಥ ಬಾಗಲಿ ಎಂಬ ವ್ಯಕ್ತಿ ಕೊಪ್ಪಳ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಗೆಲುವಿಗೆ ಪ್ರಾರ್ಥಿಸಿ ಇಂದು ದೀರ್ಘ ದಂಡ ನಮಸ್ಕಾರ ಹಾಕಿದರು. ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಶ್ರೀ ಗವಿಸಿದ್ದೇಶ್ವರ ಮಠದವರೆಗೂ ದೀರ್ಘ ದಂಡ ನಮಸ್ಕಾರ ಹಾಕಿದ್ದಾನೆ. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು.