ಕೊರೊನಾ ಭೀತಿ: ಕಲಬುರಗಿ ಬಸ್ ನಿಲ್ದಾಣದಲ್ಲಿ ಕಡಿಮೆಯಾದ ಪ್ರಯಾಣಿಕರ ಸಂಖ್ಯೆ - ಕಲಬುರಗಯಲ್ಲಿ ಕೊರೊನಾ ಭೀತಿ
ಕಲಬುರಗಿ: ಕೊರೊನಾದಿಂದ ಜಿಲ್ಲೆಯಲ್ಲಿ ವೃದ್ಧ ಸಾವನ್ನಪ್ಪಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಇನ್ನೊಂದೆಡೆ ಜನರು ಮನೆಯಿಂದ ಹೊರಬಾರದೆ ಜನ ಸಂಚಾರ ಸಹ ಕಡಿಮೆಯಾಗಿದೆ. ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ಹೋಗುವ ಬಸ್ ಸಂಚಾರ ಕಡಿತಗೊಳಿಸಲಾಗಿದ್ದು, ಸದಾ ಜನರಿಂದ ಕಿಕ್ಕಿರಿದು ತುಂಬಿರುತ್ತಿದ್ದ ಕೇಂದ್ರ ಬಸ್ ನಿಲ್ದಾಣದಲ್ಲೀಗ ಜನರ ಕಡಿಮೆ ಸಂಖ್ಯೆಯಲ್ಲಿ ಕಂಡುಬರುತ್ತಿದ್ದಾರೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ...