ಕರಾವಳಿಯಲ್ಲಿ ನಿಲ್ಲದ ತೌಕ್ತೆ ಆರ್ಭಟ: ಸಂಕಷ್ಟಕ್ಕೆ ಸಿಲುಕಿದ ಜನರ ಬದುಕು - cyclone tauktae effects in karavara
ಕಾರವಾರ: ಕರಾವಳಿಯಲ್ಲಿ ತೌಕ್ತೆ ಚಂಡಮಾರುತದ ಆರ್ಭಟ ಎರಡನೇ ದಿನವೂ ಮುಂದುವರಿದಿದ್ದು, ಎಂದೂ ಕಂಡರಿಯದ ರೀತಿಯಲ್ಲಿ ಬೀಸುತ್ತಿರುವ ಗಾಳಿಗೆ ಕಡಲತೀರದ ಜನ ಕಂಗಾಲಾಗಿದ್ದಾರೆ. ಅದರಲ್ಲಿಯೂ ಕಡಲಿನಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅದೆಷ್ಟೋ ಮನೆ ಹಾಗೂ ಬೋಟ್ಗಳಿಗೆ ನೀರು ನುಗ್ಗಿದ ಪರಿಣಾಮ ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ. ಕಡಲಿನ ಅಬ್ಬರದ ಕುರಿತು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.