ನಡೆದಾಡುವ ದೇವರ ಸ್ಮರಣೋತ್ಸವಕ್ಕೆ ಸಕಲ ತಯಾರಿ.. ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ! ವಿಡಿಯೋ - ಶಿವಕುಮಾರ ಸ್ವಾಮೀಜಿ ಸ್ಮರಣೋತ್ಸವ ಕಾರ್ಯಕ್ರಮ ಸುದ್ದಿ
ತುಮಕೂರು: ಜ.19ರಂದು ನಡೆಯಲಿರುವ ಶ್ರೀ ಶಿವಕುಮಾರ ಸ್ವಾಮೀಜಿಯವರ ಪ್ರಥಮ ವರ್ಷದ ಸ್ಮರಣೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಸುಮಾರು ಒಂದು ಲಕ್ಷ ಮಂದಿ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಭಕ್ತರಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿದೆ. ಮುನ್ನೂರಕ್ಕೂ ಹೆಚ್ಚು ಮಂದಿ ಬಾಣಸಿಗರು ಸಿಹಿ ಪದಾರ್ಥ ಸೇರಿ ಬರುವ ಭಕ್ತರಿಗಾಗಿ ಭೋಜನ ತಯಾರಿಸುತ್ತಿದ್ದಾರೆ. ಬೆಂಗಳೂರಿನ ಸಿದ್ದಲಿಂಗಮೂರ್ತಿ ಎಂಬುವರು 50,000 ಮೈಸೂರು ಪಾಕ್ಗಳನ್ನ ಭಕ್ತರಿಗೆ ವಿತರಿಸುತ್ತಿದ್ದಾರೆ.