1ರಿಂದ 9ನೇ ತರಗತಿ ಪರೀಕ್ಷೆ ಕುರಿತು ಇನ್ನೆರಡು ದಿನದಲ್ಲಿ ನಿರ್ಧಾರ ಪ್ರಕಟ: ಸಚಿವ ಸುರೇಶ್ ಕುಮಾರ್
ಚಿಕ್ಕಮಗಳೂರು: 1ರಿಂದ 9ನೇ ತರಗತಿ ಪರೀಕ್ಷೆ ವಿಚಾರಕ್ಕೆ ಸಂಬಧಿಸಿದಂತೆ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಈ ಬಗ್ಗೆ ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ. ಸಂಬಂಧಪಟ್ಟವರ ಕರೆದು ಚರ್ಚಿಸಿದ್ದು, ಇನ್ನೆರಡು ದಿನದಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿ ಶಿಕ್ಷಣ ಇಲಾಖೆ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಹೇಳಿದರು.