ಕರ್ನಾಟಕ

karnataka

By

Published : Sep 6, 2019, 5:03 PM IST

ETV Bharat / videos

ವಿವಾದಾತ್ಮಕ ಹೇಳಿಕೆ ನೀಡಿದ್ದ ಎಚ್. ನಾಗೇಶ್ ರಾಜೀನಾಮೆಗೆ ಆಗ್ರಹ

ಧಾರವಾಡ: ಮನೆ ಮನೆಗೆ ಸಾರಾಯಿ ಹಾಗೂ ಸಂಚಾರಿ ಸರಾಯಿ ಕೊಡುವುದಾಗಿ ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಎಚ್. ನಾಗೇಶ್ ರಾಜೀನಾಮೆ ನೀಡಬೇಕು ಅಂತ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿಯ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. ಅಷ್ಟೇ ಅಲ್ಲ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ಜನರಿಗೆ ಕುಡಿಯಲು ನೀರಿಲ್ಲ, ಆದ್ರೆ ಅವಿವೇಕಿ ಸಚಿವ ಮನೆ ಮನೆಗೆ ಸಾರಾಯಿ ಕೊಡೋದಾಗಿ ಸಮಾಜ ಘಾತಕ ಹೇಳಿಕೆ ನೀಡಿದ್ದಾರೆ. ಇಂತಹ ಸಚಿವರು ನಮ್ಮ ರಾಜ್ಯಕ್ಕೆ ಬೇಡ. ಈ ಕೂಡಲೇ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಗೇಶ್​ರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು, ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುತ್ತೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details