ಕಾಲುವೆ ಒಡೆದು ಜಮೀನಿಗೆ ನುಗ್ಗಿದ ನೀರು... ಬೆಳೆ ನಷ್ಟ ಭರಿಸುವಂತೆ ರೈತರ ಆಗ್ರಹ
ವಿಜಯಪುರ: ಕಾಲುವೆ ಒಡೆದು ಜಮೀನಿಗೆ ನೀರು ನುಗ್ಗಿ ಬೆಳೆ ಕೊಚ್ಚಿಹೋದ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ಯತ್ನಾಳ ಬಳಿ ನಡೆದಿದೆ. ಕಾಲುವೆಗೆ ಮಳೆಯ ನೀರು ಸೇರಿಕೊಂಡು ಜಮೀನಿಗೆ ನುಗ್ಗಿದ ಪರಿಣಾಮ ಸಜ್ಜೆ, ದ್ರಾಕ್ಷಿ ಸೇರಿದಂತೆ ಇತರೆ ಬೆಳೆಗಳು ಸಂಪೂರ್ಣ ಹಾನಿಗೀಡಾಗಿವೆ. ಈ ನಷ್ಟವನ್ನು ಭರಿಸುವಂತೆ ರೈತರು ಆಗ್ರಹಿಸಿದ್ದಾರೆ. ಕಾಲುವೆ ನೀರು ನುಗ್ಗಿ ಬೆಳೆಹಾನಿಯಾಗಿರುವ ಕುರಿತು ಸಮೀಕ್ಷೆ ನಡೆಸಲು ಜಿಲ್ಲಾಡಳಿತ ಮುಂದಾಗಿದ್ದು, ರೈತರಿಗೆ ಸೂಕ್ತ ಪರಿಹಾರ ಕೊಡಿಸುವ ಭರವಸೆಯನ್ನು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ನೀಡಿದ್ದಾರೆ.