ಶಿವಕುಮಾರ ಸ್ವಾಮೀಜಿ ಹುಟ್ಟುಹಬ್ಬ ಆಚರಿಸಲು ಭಕ್ತರಿಗೆ ಎದುರಾಗಿದೆ ಕೊರೊನಾ ಭೀತಿ - Shivakumara Swamiji birthday
ತುಮಕೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಏಪ್ರಿಲ್ 1ರಂದು ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಯವರ 113ನೇ ಜನ್ಮಜಯಂತಿ ಆಚರಿಸಲು ಭಕ್ತರಿಗೆ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ತುಮಕೂರು ನಗರದಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಶಿವಕುಮಾರ ಸ್ವಾಮೀಜಿ ಅವರ ಭಾವಚಿತ್ರಗಳನ್ನು ಹಾಕಿ ಇದಕ್ಕಾಗಿ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಕೊರೊನಾ ವೈರಸ್ ಭೀತಿ ಈ ಬಾರಿ ಭಕ್ತರಲ್ಲಿ ನಿರಾಸೆ ಮೂಡಿಸಿದೆ.