ಕರ್ನಾಟಕ

karnataka

ETV Bharat / videos

ಮೈದುಂಬಿ ಹರಿಯುತ್ತಿರುವ ಕಾವೇರಿ : ಮಡಿಕೇರಿ-ವಿರಾಜಪೇಟೆ ಸಂಪರ್ಕ ಸಂಪೂರ್ಣ ಕಡಿತ - Madikeri and virajpet road closed

By

Published : Aug 8, 2019, 8:35 PM IST

ಕೊಡಗು : ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಡಿಕೇರಿಯಲ್ಲಿ ಕಾವೇರಿ ನದಿ (ಭೇತ್ರಿ ಹೊಳೆ) ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಕೊಡಗು-ವಿರಾಜಪೇಟೆ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ಮಡಿಕೇರಿ-ವಿರಾಜಪೇಟೆ ಸಂಪರ್ಕ ರಸ್ತೆ ಜಲಾವೃತವಾಗಿದ್ದು, ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ರಸ್ತೆ ಮೇಲೆ ಸುಮಾರು ನಾಲ್ಕೈದು ಅಡಿಗಳಷ್ಟು ನೀರು ಹರಿಯುತ್ತಿದೆ. ಬ್ರಹ್ಮಗಿರಿ, ಭಾಗಮಂಡಲ, ನಾಪೋಕ್ಲು ಹಾಗೂ ವಿರಾಜಪೇಟೆ ವ್ಯಾಪ್ತಿಯಲ್ಲಿ ವಿಪರೀತ ವರ್ಷಾಧಾರೆ ಆಗುತ್ತಿರುವುದರಿಂದ ಮೇಲ್ಸೇತುವೆ ಸಂಪೂರ್ಣ ಮುಳುಗಿದೆ. ಈ ಕುರಿತು ಸಂಪೂರ್ಣ ವರದಿ ಇಲ್ಲಿದೆ ನೋಡಿ....

ABOUT THE AUTHOR

...view details