ಕರ್ನಾಟಕ

karnataka

By

Published : May 16, 2020, 4:47 PM IST

ETV Bharat / videos

ಕೃಷಿ ಕ್ಷೇತ್ರಕ್ಕೆ ಕೇಂದ್ರದ ಪ್ಯಾಕೇಜ್​​ ಘೋಷಣೆ ಆಕರ್ಷಕ, ಅನುಷ್ಠಾನದ್ದೇ ಚಿಂತೆ: ಶಾಂತಕುಮಾರ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು 20 ಲಕ್ಷ ಕೋಟಿಯ ಪ್ಯಾಕೇಜ್​ ಘೋಷಣೆ ಮಾಡಿದ ಬೆನ್ನಲ್ಲೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಕೃಷಿ ಕ್ಷೇತ್ರಕ್ಕೆ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದಾರೆ. ಈ ಕುರಿತಂತೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಈಟಿವಿ ಭಾರತದೊಂದಿಗೆ ಮಾತನಾಡಿ, ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಚಿವರು ಘೋಷಿಸಿರುವ ಯೋಜನೆಗಳು ಆಕರ್ಷಕವಾಗಿದ್ದು, ಅವು ಎಷ್ಟರ ಮಟ್ಟಿಗೆ ಅನುಷ್ಠಾನ ಆಗುತ್ತವೆ ಎಂಬುದನ್ನು ನೋಡಬೇಕು. ಇದೇ ವೇಳೆ ರೈತರು ಬೆಳೆದ ಎಲ್ಲಾ ಉತ್ಪನ್ನಗಳಿಗೆ ಸರ್ಕಾರ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು. ಜೊತೆಗೆ ಬಿತ್ತನೆ ಸಮಯವಾದ ಕಾರಣ ರೈತರಿಗೆ ಕೂಡಲೇ ಐವತ್ತು ಸಾವಿರದಿಂದ ಒಂದು ಲಕ್ಷ ರೂಪಾಯಿ ಸಾಲವನ್ನು ನೀಡಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details