ಚಾಮರಾಜನಗರ : ಆಕಸ್ಮಿಕ ಬೆಂಕಿ ಬಿದ್ದು ಹೊತ್ತಿ ಉರಿದ ಜೋಳದ ಬಣವೆ - ಚಾಮರಾಜನಗರ ಲೇಟೆಸ್ಟ್ ನ್ಯೂಸ್
🎬 Watch Now: Feature Video
ಚಾಮರಾಜನಗರ: ಆಕಸ್ಮಿಕ ಬೆಂಕಿ ಅನಾಹುತದಿಂದ ಜೋಳದ ಬಣವೆ ಸುಟ್ಟು ಭಸ್ಮವಾಗಿರುವ ಘಟನೆ ಹನೂರು ತಾಲೂಕಿನ ತೊಮಿಯಾರ್ ಪಾಳ್ಯ ಸಮೀಪದ ಎಸ್.ದೊಡ್ಡಿಯಲ್ಲಿ ನಡೆದಿದೆ. ತೊಮಿಯಾರ್ ಪಾಳ್ಯ ಸಮೀಪದ ಸಂಗೀತದೊಡ್ಡಿಯಲ್ಲಿ ಶೇಶುರಾಜ್ ಎಂಬುವರಿಗೆ ಸೇರಿದ ಜೋಳದ ಬಣವೆಗೆ ಆಕಸ್ಮಿಕ ಬೆಂಕಿ ಬಿದ್ದು ಸಂಪೂರ್ಣ ಭಸ್ಮವಾಗಿದೆ. ಈ ಕುರಿತಂತೆ ಮಾಹಿತಿ ಪಡೆದ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.