ಕರ್ನಾಟಕ

karnataka

By

Published : Oct 29, 2020, 1:59 PM IST

Updated : Oct 29, 2020, 3:29 PM IST

ETV Bharat / videos

ಕೆ ಕಲ್ಯಾಣ್​​ ದಾಂಪತ್ಯದಲ್ಲಿ ಬಿರುಕು ಮೂಡಿಸಿದ್ದ ಆರೋಪಿ ಗಂಗಾ ಕೋರ್ಟ್​ ಆವರಣದಲ್ಲೇ ಆತ್ಮಹತ್ಯೆ!

ಕೊಪ್ಪಳ: ಚಿತ್ರಸಾಹಿತಿ ಕೆ. ಕಲ್ಯಾಣ ದಾಂಪತ್ಯದಲ್ಲಿ ಬಿರುಕು ಮೂಡಿಸಿದ್ದ ಆರೋಪ ಹೊತ್ತಿದ್ದ ಗಂಗಾ ಕುಲಕರ್ಣಿ ಅಲಿಯಾಸ್ ಜ್ಯೋತಿ ಕುಲಕರ್ಣಿ ಕೊಪ್ಪಳದ ಕುಷ್ಟಗಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಷ್ಟಗಿ ನ್ಯಾಯಾಲಯದ ಆವರಣದಲ್ಲಿ ವಿಷ ಸೇವಿಸಿ ಗಂಗಾ ಕುಲಕರ್ಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾ ಕುಲಕರ್ಣಿ ಇಂದು ವಿಚಾರಣೆಗೆ ಕುಷ್ಟಗಿ ನ್ಯಾಯಾಲಯಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ನ್ಯಾಯಾಲಯದ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
Last Updated : Oct 29, 2020, 3:29 PM IST

ABOUT THE AUTHOR

...view details