ರಾಮನಗರ ಜಿಲ್ಲೆಯಲ್ಲಿ ಸುರಿಯಿತು ಧಾರಾಕಾರ ಮಳೆ
ರಾಮನಗರ: ಜಿಲ್ಲೆಯಲ್ಲಿ ಗುಡುಗು ಮಿಂಚು ಸಮೇತ ಧಾರಾಕಾರ ಮಳೆ ಸುರಿದಿದೆ. ಕನಕಪುರದಲ್ಲಿ ಇಂದು ಸಂಜೆ ವೇಳೆಗೆ ಗುಡುಗು ಮಿಂಚು ಸಹಿತ ಜೋರಾಗಿ ಆಲಿಕಲ್ಲು ಮಳೆ ಬಿದ್ದಿದೆ. ಬೆಳಗ್ಗಿನಿಂದ ಭಾರಿ ಬಿಸಿಲಿನ ವಾತಾವರಣ ಇದ್ದು, ಸಂಜೆ ವೇಳೆ ಮೋಡ ಕವಿದು ನಂತರ ಆಲಿಕಲ್ಲು ಮಳೆಯಾಯಿತು. ಅರ್ಧ ಗಂಟೆ ಕಾಲ ಸುರಿದ ಮಳೆಯಿಂದ ಜನ-ಜೀವನ ಅಸ್ತವ್ಯಸ್ತಗೊಂಡಿತ್ತು.