ಕರ್ನಾಟಕ

karnataka

ಚಿಕ್ಕಮಗಳೂರಿನಲ್ಲಿ ವರುಣನ ಅಬ್ಬರ: ರಾಷ್ಟ್ರೀಯ ಹೆದ್ದಾರಿ 119ರಲ್ಲಿ ಸಂಚಾರ ಬಂದ್

By

Published : Aug 10, 2020, 10:50 AM IST

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಭಾರಿ ಮಳೆಯಿಂದ ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಬಳಿ ರಸ್ತೆ ಪಕ್ಕದಲ್ಲಿ ಇರುವಂತಹ ಮಣ್ಣು ಕೊಚ್ಚಿ ಹೋಗುತ್ತಿದೆ. ರಾಷ್ಟ್ರೀಯ ಹೆದ್ದಾರಿ 119 ರಲ್ಲಿ ರಸ್ತೆ ಸಂಚಾರ ಬಂದ್ ಆಗಿದ್ದು, ಶೃಂಗೇರಿ - ಕುದುರೆಮುಖ - ಮಂಗಳೂರು ಸಂಚಾರ ಸ್ಥಗಿತಗೊಳಿಸಲಾಗಿದೆ. ಇನ್ನು ಮೂಡಿಗೆರೆ ತಾಲೂಕಿನ ಅಬ್ಬ ಗೂಡಿಗೆಯ ಕಿರು ಸೇತುವೆಯು ಕೊಚ್ಚಿ ಹೋಗಿದ್ದು, ಅಬ್ಬ ಗೂಡಿಗೆ - ಕಲಗೋಡು ಗ್ರಾಮಗಳ ಸಂಪರ್ಕ ಕಡಿತವಾಗಿದೆ.

ABOUT THE AUTHOR

...view details