ಕರ್ನಾಟಕ

karnataka

ETV Bharat / videos

ಕೊಡಗಿನಲ್ಲಿ ಮುಂದುವರೆದ ವರುಣನ ಆರ್ಭಟ.. ಮೂರನೇ ಬಾರಿ ಜಲಾವೃತಗೊಂಡ ಭಾಗಮಂಡಲ.. - Bhagamandala

By

Published : Sep 9, 2019, 10:01 AM IST

ಕೊಡಗು ಜಿಲ್ಲೆಯ ತಲಕಾವೇರಿ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಆಗುತ್ತಿರುವುದರಿಂದ ಭಾಗಮಂಡಲದ ತ್ರಿವೇಣಿ ಸಂಗಮ ಮೂರನೇ ಬಾರಿಗೆ ಜಲಾವೃತವಾಗಿದೆ. ನಾಪೋಕ್ಲು, ಬ್ರಹ್ಮಗಿರಿ, ವಿರಾಜಪೇಟೆ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ ಆಗಿದ್ದು, ಭಾಗಮಂಡಲ-ನಾಪೋಕ್ಲು ರಸ್ತೆ ಸಂಪರ್ಕ ಕಡಿತವಾಗಿದೆ. ರಾತ್ರಿಯಿಡಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಸ್ಥಳೀಯರಲ್ಲಿ ಮತ್ತೆ ಆತಂಕ ಹೆಚ್ಚಿದೆ. ಅತ್ತ ದಕ್ಷಿಣ ಕೊಡಗಿನಲ್ಲೂ ವರುಣನ ಅಬ್ಬರ ಮುಂದುವರೆದಿದೆ.

ABOUT THE AUTHOR

...view details