ಬಿಸಿಲನಾಡಲ್ಲಿ ವರುಣನ ಅಬ್ಬರ: ಮಲ್ಲಟ ವಸತಿ ಶಾಲೆ ಜಲಾವೃತ - Raichuru rain news
ರಾಯಚೂರು ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದ ಕಸ್ತೂರಿಬಾ ಗಾಂಧೀಜಿ ವಸತಿ ಶಾಲೆಯ ಆವರಣಕ್ಕೆ ಮಳೆಯ ನೀರು ನುಗ್ಗಿದೆ. ಇದರಿಂದಾಗಿ ಶಾಲೆಯ ಮಕ್ಕಳಿಗೆ ಓಡಾಡಲು ತೊಂದರೆಯಾಗಿದೆ. ಇನ್ನು ಶಾಲಾ ಆವರಣದಲ್ಲಿ ಸಂಗ್ರಹವಾಗುವ ನೀರಿಗೆ ಹರಿದು ಹೋಗುವ ವ್ಯವಸ್ಥೆ ಮಾಡದ ಕಾರಣ ಈ ರೀತಿಯ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.