ಸಾರಿಗೆ ಮುಷ್ಕರಕ್ಕೆ ಹೊಸಪೇಟೆಯಲ್ಲಿ ಸಿಬ್ಬಂದಿಯಿಂದ ಸಂಪೂರ್ಣ ಬೆಂಬಲ
ಹೊಸಪೇಟೆ: ರಸ್ತೆ ಸಾರಿಗೆ ನೌಕರರ ಒಕ್ಕೂಟ ಕರೆ ನೀಡಿರುವ ಮುಷ್ಕರಕ್ಕೆ ಹೊಸಪೇಟೆಯಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಎನ್ಈಕೆಎಸ್ಆರ್ಟಿಸಿ ಹೊಸಪೇಟೆ ವಿಭಾಗದ ವ್ಯಾಪ್ತಿಯ ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಹರಪನಹಳ್ಳಿ, ಕೂಡ್ಲಿಗಿ, ಸಂಡೂರ ಹಾಗೂ ಹೊಸಪೇಟೆಯಲ್ಲಿ 400ಕ್ಕೂ ಹೆಚ್ಚು ಬಸ್ಗಳು ಕಾರ್ಯನಿರ್ವಹಿಸುತ್ತಿದ್ದವು. ಇಂದು ಪ್ರಯಾಣಿಕರಿಗೆ ತೊಂದರೆಯಾಗದಂತೆ ಖಾಸಗಿ ವಾಹನಗಳಿಗೆ ಬಸ್ ನಿಲ್ದಾಣದ ಒಳಗಡೆ ಅವಕಾಶವನ್ನು ನೀಡಲಾಗಿದೆ. ಪ್ರಯಾಣಿಕರಿಂದ ದುಪ್ಪಟ್ಟು ಹಣ ಪಡೆಯಬಾರದು ಎಂದು ಅಧಿಕಾರಿಗಳು ಖಾಸಗಿ ವಾಹನಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು 'ಈಟಿವಿ ಭಾರತ' ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.