ಕೊರೊನಾ ಕರಿಛಾಯೆ... ಕೊಪ್ಪಳದಲ್ಲಿ ನಡೆಯಬೇಕಿದ್ದ ಬೃಹತ್ ಉದ್ಯೋಗ ಮೇಳ ಮುಂದೂಡಿಕೆ - ಕೊರೊನಾ ವೈರಸ್
ಕೊರೊನಾ ವೈರಸ್(ಕೋವಿಡ್ -19) ಸೋಂಕು ರಾಜ್ಯದಲ್ಲಿಯೂ ಕೆಲವರಿಗೆ ತಗುಲಿರುವುದು ಜನರಲ್ಲಿ ಭೀತಿ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ನಡೆಯಬೇಕಿದ್ದ ಬೃಹತ್ ಉದ್ಯೋಗ ಮೇಳವನ್ನು ಮುಂದೂಡಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಈ ಕುರಿತು ನಮ್ಮ ಕೊಪ್ಪಳ ಪ್ರತಿನಿಧಿ ಪ್ರತ್ಯಕ್ಷ ವರದಿ ನೀಡಿದ್ದಾರೆ.