ಸರ್ಕಾರಿ ಕಚೇರಿಯಲ್ಲಿ ಎಂದಿನಂತೆ ಕಾರ್ಯನಿರ್ವಹಣೆ: ಮಾಲ್ಗಳಿಗೂ ತಟ್ಟದ ಬಂದ್ ಬಿಸಿ - ಕರ್ನಾಟಕ ಬಂದ್ ಹಿನ್ನೆಲೆ
ಬೆಂಗಳೂರು: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಬಂದ್ಗೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ನೈತಿಕ ಬೆಂಬಲ ನೀಡುತ್ತೇವೆ. ಆದರೆ ಯಾವುದೇ ಸರ್ಕಾರಿ ರಜೆ ನೀಡುವುದಿಲ್ಲ ಎಂದಿದ್ದರು. ಅದರಂತೆ ಇಂದು ಬಿಬಿಎಂಪಿ ಸೇರಿದಂತೆ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಮಾಲ್ಗಳಿಗೂ ಬಂದ್ ಬಿಸಿ ತಟ್ಟಿಲ್ಲ. ಈ ಕುರಿತಂತೆ ನಮ್ಮ ಪ್ರತಿನಿಧಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.