ಮಹದಾಯಿ ಕುರಿತು ಸುಪ್ರೀಂ ತೀರ್ಪು: ಹೋರಾಟಗಾರರಿಂದ ಸಂಭ್ರಮಾಚರಣೆ - Mahdai Supreme Verdict
ಧಾರವಾಡ: ಕೇಂದ್ರ ಸರ್ಕಾರ ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದ ಹಿನ್ನೆಲೆ ಧಾರವಾಡದಲ್ಲಿ ಮಹದಾಯಿ ಹೋರಾಟಗಾರರು ಸಂಭ್ರಮಾಚರಣೆ ಮಾಡಿದರು. ನಗರದ ಜ್ಯುಬಿಲಿ ವೃತ್ತದಲ್ಲಿ ವಿಜಯೋತ್ಸವ ಆಚರಿಸಿದ ಮಹದಾಯಿ ಹೋರಾಟಗಾರರು, ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.