ಮನ್ಮುಲ್ ಚುನಾವಣೆ: ಅಧಿಕಾರ ಸಿಗುವ ವಿಶ್ವಾಸದಲ್ಲಿ ಜೆಡಿಎಸ್ - Mandya latest news
ಮಂಡ್ಯ: ಭಾನುವಾರವಷ್ಟೇ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಮನ್ಮುಲ್) ಫಲಿತಾಂಶ ಹೊರ ಬಂದಿದೆ. 8 ಸ್ಥಾನ ಪಡೆದಿರುವ ಜೆಡಿಎಸ್ ಮುಖಂಡರು ಡೈರಿಯ ಅಧಿಕಾರದ ಗದ್ದುಗೆ ಏರುವ ವಿಶ್ವಾಸದಲ್ಲಿದ್ದಾರೆ. ಹೀಗಾಗಿ ಗೆದ್ದ ನಿರ್ದೇಶಕರಿಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಭಿನಂದನೆ ಸಲ್ಲಿಸಿದ್ದಾರೆ. ಕಳೆದ ಬಾರಿಯ ಆಡಳಿತ ಮಂಡಳಿಯ ಭ್ರಷ್ಟಾಚಾರ ನಮ್ಮ ಕೈ ಹಿಡಿದಿದೆ ಎಂದು ಮಾಜಿ ಸಚಿವ ಪುಟ್ಟರಾಜು ವಿಶ್ವಾಸ ವ್ಯಕ್ತಪಡಿಸಿದರು. ಜೊತೆಗೆ ಮತದಾರರಿಗೆ ಕೃತಜ್ಞತೆ ಸಲ್ಲಿಸಿ, ಡೈರಿಯ ಅಭಿವೃದ್ಧಿಗೆ ಆದ್ಯತೆ ಎಂದರು.