ಕರ್ನಾಟಕ

karnataka

ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಹೂ, ಸಿಹಿ ನೀಡಿ ಸ್ವಾಗತಿಸಿದ ಸಚಿವ ಪ್ರಭು ಚವ್ಹಾಣ್​

By

Published : Jan 1, 2021, 7:59 PM IST

Published : Jan 1, 2021, 7:59 PM IST

ಬೀದರ್: ಕೊರೊನಾ ಭೀತಿಯಿಂದ ಬಂದ್ ಆಗಿದ್ದ ಶಾಲೆಗಳು 10 ತಿಂಗಳ ನಂತರ ಇದೀಗ ಆರಂಭವಾಗಿವೆ. ಬೀದರ್ ಜಿಲ್ಲೆಯಲ್ಲೂ ಶಾಲೆಗಳು ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಸಂತಸದಿಂದ ಶಾಲೆಗೆ ಆಗಮಿಸುತ್ತಿದ್ದಾರೆ. ಬೆಳಗ್ಗೆಯಿಂದಲೂ ಶಿಕ್ಷಕರು ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್ ಮೂಲಕ ಆರೋಗ್ಯ ತಪಾಸಣೆ ಮಾಡಿ ಮಾಸ್ಕ್, ಸ್ಯಾನಿಟೈಸರ್​ ನೀಡಿ ಸಾಮಾಜಿಕ ಅಂತರ ಕಾಪಾಡಿಕೊಂಡು ಶಾಲೆಯಲ್ಲಿ ತರಗತಿಗಳನ್ನು ಆರಂಭಿಸಿದ್ದಾರೆ. ಜಿಲ್ಲೆಯ ಔರಾದ್ ತಾಲೂಕಿನ ಹೊಕ್ರಾಣ ಸರ್ಕಾರಿ ಶಾಲೆಗೆ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್​ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಹೂ ನೀಡಿ, ಸಿಹಿ ಹಂಚಿ, ಮಾಸ್ಕ್, ಸ್ಯಾನಿಟೈಸರ್ ವಿತರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಶಾಲೆಗೆ ಬರುವಂತೆ ತಿಳಿಸಿದರು.

ABOUT THE AUTHOR

...view details