ಪದೇ ಪದೇ ಸಾಮಾಜಿಕ ಅಂತರ ಉಲ್ಲಂಘಿಸುತ್ತಿರುವ ಸಚಿವ ರಮೇಶ ಜಾರಕಿಹೊಳಿ: ಸಾರ್ವಜನಿಕರ ಆಕ್ರೋಶಕ್ಕೆ ಗುರಿ... - Minister Ramesh jarakiholi
ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನೇ ದಿನೇ ಹೆಚ್ಚಾಗುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮಾತ್ರ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಪದೇ ಪದೇ ಸಾಮಾಜಿಕ ಅಂತರವನ್ನು ಉಲ್ಲಂಘನೆ ಮಾಡುತ್ತಿದ್ದು,ಇದಕ್ಕೆ ಸೂಕ್ತ ನಿದರ್ಶನವೆಂಬಂತೆ ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗಿರುವ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುವ ವೇಳೆ ಮತ್ತೆ ನಿಯಮ ಉಲ್ಲಂಘಿಸಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.