ತಮ್ಮೂರಿಗೆ ಮರಳುತ್ತಿದ್ದಾರೆ 500ಕ್ಕೂ ಹೆಚ್ಚು ವಲಸೆ ಕಾರ್ಮಿಕರು: ಜಿಲ್ಲಾಡಳಿತ ಮಾಡಿದೆ ಸಕಲ ಸಿದ್ಧತೆ
ಉಡುಪಿ: ಕೊರೊನಾ ಲಾಕ್ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮೂರಿಗೆ ಮರಳುತ್ತಿದ್ದಾರೆ. ರಾಜ್ಯ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ವ್ಯವಸ್ಥೆ ಮಾಡಲಾಗಿದ್ದು, ನಿರಾಶ್ರಿತರ ಶಿಬಿರಗಳಲ್ಲಿದ್ದ 500ಕ್ಕೂ ಹೆಚ್ಚು ಕಾರ್ಮಿಕರನ್ನು ಸರ್ಕಾರಿ ಬಸ್ಗಳಲ್ಲಿ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ನಗರದ ಬೋರ್ಡ್ ಶಾಲೆಗಳಲ್ಲಿದ್ದ ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರಾವಾಡ ಜಿಲ್ಲೆಗಳ ಕಾರ್ಮಿಕರನ್ನು 20 ಬಸ್ಗಳಲ್ಲಿ ಊರಿಗೆ ಕಳುಹಿಸುವ ಕಾರ್ಯವನ್ನು ಜಿಲ್ಲಾಡಳಿತ ಮಾಡಿದೆ. ಜೊತೆಗೆ ಸ್ಯಾನಿಟೈಸರ್, ಮಾಸ್ಕ್, ಫುಡ್ ಕಿಟ್ ನೀಡಿ ಕಾರ್ಮಿಕರನ್ನು ಜಿಲ್ಲಾಡಳಿತ ಬೀಳ್ಕೊಟ್ಟಿದೆ.