ಪ್ರಯಾಣಿಕರಿಲ್ಲದೆ ಸಾರಿಗೆ ಸಂಸ್ಥೆಗೆ ಲಕ್ಷಾಂತರ ರೂ. ನಷ್ಟ - corona effect on bus
ಕೊರೊನಾ ಭೀತಿಯ ಕರಿನೆರಳು ಎಲ್ಲ ಕ್ಷೇತ್ರಗಳ ಮೇಲೂ ಆವರಿಸಿದೆ. ಅದಕ್ಕೆ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯೂ ಹೊರತಾಗಿಲ್ಲ. ಪ್ರಯಾಣಿಕರ ಸಂಖ್ಯೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಇಳಿಮುಖವಾಗಿದ್ದು ಬಸ್ಗಳು ಖಾಲಿ ಹೊಡೆಯುತ್ತಿವೆ. ಜಿಲ್ಲೆಯ ವಿವಿಧ ಡಿಪೋಗಳಿಂದ ಬೀದರ್, ಕಲಬುರ್ಗಿ ಹಾಗೂ ಮಹಾರಾಷ್ಟ್ರದ ಕಡೆಗೆ ಓಡಾಡುವ 24 ಶೆಡ್ಯೂಲ್ಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ಈ ಕುರಿತು ನಮ್ಮ ಕೊಪ್ಪಳ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.