ಮಹದಾಯಿಗಾಗಿ ಮತ್ತೆ ಬೀದಿಗಿಳಿಯಲ್ಲಿದ್ದಾರೆ ಉತ್ತರ ಕರ್ನಾಟಕ ಭಾಗದ ಜನತೆ
ಹುಬ್ಬಳ್ಳಿ: ನಿರಂತರ ಹೋರಾಟದ ಫಲವಾಗಿ ಮಹದಾಯಿ ನ್ಯಾಯಾಧೀಕರಣದ ತೀರ್ಪು ಬಂದಿದೆ. ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೆ. ರಾಜ್ಯ ಸರ್ಕಾರ 1,600 ಕೋಟಿ ರೂಪಾಯಿಗಳನ್ನು ಕಾಮಗಾರಿಗೆ ತೆಗೆದಿಟ್ಟಿದೆ. ಆದ್ರು ಕಾಮಗಾರಿ ಶುರುವಾಗದೇ ಇರುವುದಕ್ಕೆ ಅಸಮಾಧಾನಗೊಂಡಿರುವ ಅನ್ನದಾತರು ಮತ್ತೆ ಮಹದಾಯಿಗಾಗಿ ಹೋರಾಟಕ್ಕೆ ಸಿದ್ಧ ಎಂಬ ಎಚ್ಚರಿಕೆ ನೀಡಿದ್ದಾರೆ.