ಸಚಿವ ಸಿಟಿ ರವಿ ಹೇಳಿಕೆ ವಿರುದ್ಧ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ
ನಾಡಧ್ವಜಕ್ಕೆ ಸಂಬಂಧಿಸಿದಂತೆ ರಾಷ್ಟ್ರಕ್ಕೆ ಒಂದೇ ಧ್ವಜ ಇರಲಿ. ಕರ್ನಾಟಕಕ್ಕೆ ಪ್ರತ್ಯೇಕವಾದ ಅಧಿಕೃತ ನಾಡ ಧ್ವಜದ ಅಗತ್ಯ ಇಲ್ಲ ಎಂದು ಹೇಳಿದ್ದ ಸಚಿವ ಸಿ. ಟಿ ರವಿ ವಿರುದ್ಧ ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮುಂದೆ ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘ ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಇದರ ಜೊತೆಗೆ ಬಾಶೆಟ್ಟಿಹಳ್ಳಿ ಬಳಿಯ ಮೇಲ್ಸೇತುವೆ ಕಾಮಗಾರಿ ವಿರುದ್ಧವೂ ಪ್ರತಿಭಟನೆ ನಡೆಯಿತು.