ಕರ್ನಾಟಕ

karnataka

ಮೊದಲು ಖರ್ಗೆ ನಾಲಿಗೆ ಬಿಗಿಹಿಡಿದು ಮಾತನಾಡಲಿ: ತೆಲ್ಕೂರ್ ಆಕ್ರೋಶ!

By

Published : Apr 7, 2021, 5:48 PM IST

Published : Apr 7, 2021, 5:48 PM IST

ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ಅವರು ಮೊದಲು ನಾಲಿಗೆ ಬಿಗಿಹಿಡಿದು ಮಾತನಾಡಲಿ ಎಂದು ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಳೀನ್​​ ಕುಮಾರ್ ಅವರು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ ಅಷ್ಟೇ. ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಕದ ರಾಜ್ಯಕ್ಕೆ ಹೋದಾಗ ಆರ್​ಎಸ್​ಎಸ್ ಹಾಗೂ ಬಿಜೆಪಿ ವಿಷ ಉಗುಳುವ ಪಕ್ಷ ಎಂದು ವ್ಯಂಗ್ಯವಾಡಿದ್ದರು. ಅದಕ್ಕೆ ನಮ್ಮ ರಾಜಾಧ್ಯಕ್ಷರು ಪ್ರತ್ಯುತ್ತರ ನೀಡಿದ್ದಾರೆ ಅಷ್ಟೇ. ಇದಕ್ಕೆ ಕಾಂಗ್ರೆಸ್​​ ಮುಖಂಡರು ಪ್ರತಿಕ್ರಿಯಿಸಿ ನಮ್ಮ ರಾಜಾಧ್ಯಕ್ಷರು ನಾಲಿಗೆ ಬಿಗಿಹಿಡಿದು ಮಾತನಾಡಲಿ ಎಂದು ಹೇಳಿದ್ದಾರೆ. ಇದು ಸರಿಯಲ್ಲ ಎಂದು ಕಿಡಿಕಾರಿದರು. ಮೊದಲು ಮಲ್ಲಿಕಾರ್ಜುನ ಖರ್ಗೆ ಅವರು ನಾಲಿಗೆ ಬಿಗಿ ಹಿಡಿದು ಮಾತನಾಡಲಿ ಎಂದು ಹರಿಹಾಯ್ದರು. ಕಾಂಗ್ರೆಸ್​​ ಪಕ್ಷದಲ್ಲೇ ಹೊಂದಾಣಿಕೆ ಕೊರತೆ ಇದೆ. ಡಿಕೆಶಿ ಒಂದು ಹೇಳಿಕೆ ನೀಡಿದ್ರೆ ಸಿದ್ದರಾಮಯ್ಯ ಮತ್ತೊಂದು ಹೇಳಿಕೆ ನೀಡುತ್ತಿದ್ದಾರೆ. ಮೊದಲು ಅವರ ಪಕ್ಷವನ್ನು ಶುದ್ಧ ಮಾಡಿಕೊಳ್ಳಲಿ. ಆಮೇಲೆ ಮತ್ತೊಬ್ಬರ ಬಗ್ಗೆ ಮಾತನಾಡಲಿ ಎಂದರು.

ABOUT THE AUTHOR

...view details