ಕರ್ನಾಟಕ

karnataka

ETV Bharat / videos

ಸಿಡಿ ಪ್ರಕರಣದಿಂದ ಉಪಚುನಾವಣೆಗೆ ತೊಂದರೆಯಾಗಲ್ಲ: ಸಚಿವ ಶ್ರೀಮಂತ ಪಾಟೀಲ್​​ - belagavi by election

By

Published : Mar 29, 2021, 4:58 PM IST

ಚಿಕ್ಕೋಡಿ: ರಮೇಶ್​​ ಜಾರಕಿಹೊಳಿ ಸಿಡಿ ಪ್ರಕರಣದಿಂದ ಬೆಳಗಾವಿ ಉಪಚುನಾವಣೆಗೆ ಯಾವುದೇ ರೀತಿ ತೊಂದರೆಯಾಗುವುದಿಲ್ಲ. ಅದು ವೈಯಕ್ತಿಕ ಆಗಿರುವುದರಿಂದ ಪಕ್ಷಕ್ಕೆ ಸಂಬಂಧ ಇರಲ್ಲ. ಹಾಗಾಗಿ ಉಪಚುನಾವಣೆ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಜವಳಿ ಮತ್ತು ಅಲ್ಪಸಂಖ್ಯಾತ ಖಾತೆ ಸಚಿವ ಶ್ರೀಮಂತ ಪಾಟೀಲ್​​ ಹೇಳಿದ್ದಾರೆ. ಕಾಗವಾಡ ತಾಲೂಕಿನಲ್ಲಿ ವಿವಿಧ ಕಾಮಗಾರಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಡಿ ಕೆ ಶಿವಕುಮಾರ್​ ಭಾಗಿಯಾಗಿದ್ದಾರೆ ಎಂಬುದು ಹೇಳಲಿಕ್ಕೆ ಬರುವುದಿಲ್ಲ. ಅದು ತನಿಖೆಯಿಂದ ಗೊತ್ತಾಗುತ್ತದೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸುವಾಗ ಸಿಎಂ ಯಡಿಯೂರಪ್ಪ ಪಕ್ಷದ ಅಧ್ಯಕ್ಷರು ಹಾಗೂ ವಿವಿಧ ಸಚಿವರು ಹಾಗೂ ಶಾಸಕರು ಭಾಗಿಯಾಗಲಿದ್ದಾರೆ ಎಂದು ಶ್ರೀಮಂತ ಪಾಟೀಲ್​ ತಿಳಿಸಿದರು.

ABOUT THE AUTHOR

...view details