ಕಲ್ಪತರು ನಾಡಲ್ಲಿ ಸಂಕ್ರಾಂತಿ ಸಂಭ್ರಮ.. ದೇಗುಲಗಳಲ್ಲಿ ಪೂಜೆ ಸಲ್ಲಿಸಿದ ಭಕ್ತಗಣ - ತುಮಕೂರಿನಲ್ಲಿ ಸಂಭ್ರಮದ ಸಂಕ್ರಾಂತಿ
ತುಮಕೂರು: ಸುಗ್ಗಿಯ ಹಬ್ಬ ಸಂಕ್ರಾಂತಿಯನ್ನು ದೇಗುಲಗಳಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.ಬೆಳಗ್ಗೆಯಿಂದಲೇ ನಗರದ ವಿವಿಧ ದೇವಸ್ಥಾನಗಳಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಚಿಕ್ಕಪೇಟೆಯಲ್ಲಿರುವ ಶಿವ, ಕೋಡಿ ಬಸವೇಶ್ವರ, ಕರಿ ಬಸವೇಶ್ವರ, ವೆಂಕಟೇಶ್ವರ ದೇಗುಲಗಳಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.. ಮಹಿಳೆಯರು ನಾಗರಕಟ್ಟೆ, ಅಶ್ವತ್ಥ ವೃಕ್ಷಗಳಿಗೆ ಪೂಜೆ ಸಲ್ಲಿಸಿ, ಎಳ್ಳು ಬೆಲ್ಲ ಹಂಚಿ ಸಂಭ್ರಮಪಟ್ಟರು.