ಸ್ತ್ರೀಶಕ್ತಿ ಸಂಘಟನೆ ಕಾರ್ಯಕರ್ತೆಯರಿಗೆ ಮಾಸ್ಕ್ ತಯಾರಿಸುವ ಕೆಲಸ: ಗಂಗೂಬಾಯಿ ಮಾನಕರ್ - ಕೊರೊನಾ ರೋಗ
ಬಾಗಲಕೋಟೆ: ಜಿಲ್ಲೆಯಲ್ಲಿ ಸ್ತ್ರೀ ಶಕ್ತಿ ಸಂಘಟನೆ ಮೂಲಕ ಕರೋನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ಮಾಸ್ಕ್ ತಯಾರಿಸುವ ಉದ್ಯೋಗ ನೀಡುವ ಯೋಜನೆಯನ್ನು ಜಿಲ್ಲಾ ಪಂಚಾಯತ್ ಸಿಇಒ ಗಂಗೂಬಾಯಿ ಮಾನಕರ್ ಹಾಕಿಕೊಂಡಿದ್ದಾರೆ ಎಂದು ತಿಳಿಸಿದರು. ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದ ಅವರು, ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿರುವ ಸ್ತ್ರೀ ಶಕ್ತಿ ಮಹಿಳಾ ಸಂಘಟನೆ ಕಾರ್ಯಕರ್ತೆಯರು ಮನೆಯಲ್ಲಿಯೇ ಮಾಸ್ಕ್ ತಯಾರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಚತಾ ಕಾರ್ಯ ಹಾಗೂ ಫಾಗಿಂಗ್ ಮಾಡಿರುವ ಬಗ್ಗೆ ತಿಳಿಸಿದರು.